Kshetra Samachara
Local News Subject:
ಬೈಕ್ ತಳ್ಳಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಕಾಂಗ್ರೆಸ್ ಕಾರ್ಯಕರ್ತರು...!
City:
Hubballi-Dharwad
Category:
Politics
Body:
ಹುಬ್ಬಳ್ಳಿ: ಡಿಸೇಲ್, ಪೆಟ್ರೋಲ್ ಹಾಗೂ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಯುಥ್ ಕಾಂಗ್ರೆಸ್ ವತಿಯಿಂದ ಹುಬ್ಬಳ್ಳಿ ಹೊಸೂರಿನಲ್ಲಿ ಇಂಡಿಯನ್ ಯುಥ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ ನೇತೃತ್ವದಲ್ಲಿ ಬೈಕ್ ತಳ್ಳಿಕೊಂಡು ಹೋಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಸಾರ್ವಜನಿಕರ ದೈನಂದಿನ ಬದುಕಿನಲ್ಲಿ ಇಂಧನಗಳು ಅವಶ್ಯಕವಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಬೇಕಾಬಿಟ್ಟಿಯಾಗಿ ಇಂಧನ ದರವನ್ನು ಏರಿಕೆ ಮಾಡುತ್ತಿರುವುದು ಸರಿಯಲ್ಲ ಕೂಡಲೇ ಬೆಲೆ ಏರಿಕೆಯನ್ನು ಕೈ ಬಿಟ್ಟು ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Reach Count:
55339