Kshetra Samachara
ಕಾಪು: ಯುಪಿಎ ಸರಕಾರದ ಅವಧಿಯಲ್ಲಿ ಪೈಸೆಯ ಬೆಲೆ ಏರಿಕೆಯಾದಾಗ ಗರಿ ಗರಿ ಸೀರೆ ಉಟ್ಟುಕೊಂಡು ರಸ್ತೆಯಲ್ಲಿ ಉರುಳಾಡಿದ ಸಂಸದೆ ಶೋಭಾ ಕರಂದ್ಲಾಜೆ ಈಗ ಎಲ್ಲಿ ಹೋಗಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಪ್ರಶ್ನಿಸಿದ್ದಾರೆ.
ಡೀಸೆಲ್ - ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೆಟ್ರೋಲ್ ಬಂಕ್ ಮುಂಭಾಗ ಇಂದು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
" ಕೇಂದ್ರ, ರಾಜ್ಯ ಸರಕಾರ ಕೋವಿಡ್ ಸಮಯದಲ್ಲಿಯೇ ಮುಲಾಜಿಲ್ಲದೆ ಪೆಟ್ರೋಲ್- ಡೀಸೆಲ್, ಗ್ಯಾಸ್- ವಿದ್ಯುತ್ ದರ ಏರಿಸಿ ಗಾಯದ ಮೇಲೆ ಬರೆ ಹಾಕುತ್ತಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಈ ಬಿಜೆಪಿ ಸರಕಾರಗಳು ತೈಲ ದರ ಮಾತ್ರ ಏರಿಸದೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಸಿ ಸಾಮಾನ್ಯ ಜನರಿಗೆ ಮೋಸ ಮಾಡುತ್ತಿದೆ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಮುಖಂಡರಾದ ಎಂ.ಎ. ಗಫೂರ್, ನವೀನ್ ಚಂದ್ರ ಶೆಟ್ಟಿ, ಮಹಮ್ಮದ್ ಫಾರೂಕ್, ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಪ್ರಶಾಂತ್ ಜತ್ತನ್ನ, ರಮೀಜ್ ಹುಸೇನ್, ಶರ್ಫುದ್ದೀನ್ ಶೇಖ್, ವೈ. ಸುಧೀರ್ ಕುಮಾರ್, ಯು.ಸಿ. ಶೇಖಬ್ಬ, ಸಾದಿಕ್ ದೀನಾರ್ ಮತ್ತಿತರರು ಉಪಸ್ಥಿತರಿದ್ದರು.