Kshetra Samachara
ಗದಗ: ಲಾಕ್ ಡೌನ್ ದಲ್ಲಿ ಅಧಿಕಾರಿಗಳು ಬ್ಯುಸಿ ಇರುವುದನ್ನೇ ಬಂಡವಾಳ ಮಾಡಿಕೊಂಡ ಅಕ್ರಮ ಅಕ್ಕಿ ದಂಧೆಕೋರರು ಮನೆ ಮನೆಗೆ ತೆರಳಿ ಅಕ್ಕಿ ತುಂಬಿಕೊಂಡು ಮಾರಾಟ ಮಾಡುತ್ತಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ನಡೆದಿದೆ.
ಹೌದು..ಬಡವರ ಹೊಟ್ಟೆ ತುಂಬಿಸಲು ಸರ್ಕಾರ ನೀಡಿದ ಅಕ್ಕಿ ಮೇಲೆ ಅಕ್ಕಿ ಕಳ್ಳರ ಕಣ್ಣು ಬಿದ್ದಿದೆ. ಹೀಗಾಗಿ ಕೆಜಿಗೆ 12 ರೂಪಾಯಿ ಕೊಟ್ಟು ಖರೀದಿಸುತ್ತಾರೆ. ಖರೀದಿಸಿದ ಅಕ್ಕಿಯನ್ನು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಾರೆ.
ಹಣದ ಆಸೆಗೆ ಬಡವರ ಅಕ್ಕಿ ಮೇಲೆ ಕಣ್ಣ ಹಾಕಿದ ಖದೀಮರು ರಾತ್ರೋರಾತ್ರಿ ಗೂಡ್ಸ್ ವಾಹನದ ಮೂಲಕ ಲಕ್ಷ್ಮೇಶ್ವರ ದಿಂದ ಹಾವೇರಿ ಜಿಲ್ಲೆ ಅಕ್ಕಿಆಲೂರಿಗೆ ಹೋಗಿ ಮಾರಾಟ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ರಮ ಅಕ್ಕಿದಂಧೆಗೆ ಕಡಿವಾಣ ಹಾಕಬೇಕಿದ ಆಹಾರ ಇಲಾಖೆ ಹಾಗೂ ಪೋಲಿಸ್ ಇಲಾಖೆ ಅಧಿಕಾರಿಗಳು ಗಫ್ ಚುಫ್ ಆಗಿಬಿಟ್ಟಿದ್ದಾರೆ. ಕಣ್ಣಿಗೆ ಕಂಡರು ಕಾಣದಂತೆ ಸುಮ್ಮನೆ ಕುಳಿತು ಬಿಟ್ಟಿದ್ದಾರೆ. ಇನ್ನಾದರೂ ಅಧಿಕಾರಿಗಳು ಎಚ್ಚೇತ್ತುಕೊಂಡು ಅಕ್ರಮ ಅಕ್ಕಿ ದಂಧೆಗೆ ಕಡಿವಾಣ ಹಾಕಬೇಕಿದೆ.