Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Kshetra Samachara

Local News Subject: 
ಹುಬ್ಬಳ್ಳಿ: ಇನ್ಫೋಸಿಸ್ ಕಾರ್ಯ ನಿಜಕ್ಕೂ ಶ್ಲಾಘನೀಯ: ದತ್ತಮೂರ್ತಿ...!
City: 
Hubballi-Dharwad
Video Thumbnail: 
PublicNext-473753-512655-Hubballi-Dharwad-Public-News-node
Category: 
Public News
Body: 

ಹುಬ್ಬಳ್ಳಿ: ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷರಾದ ಸುಧಾಮೂರ್ತಿಯವರು ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದು, ರಾಷ್ಟ್ರೋತ್ಥಾನ ರಕ್ತನಿಧಿಯ ಮೂಲಕ ಈಗಾಗಲೇ 5000 ಆಹಾರ ಕಿಟ್ ಗಳನ್ನು ರಾಜ್ಯದ ವಿವಿಧ ಮೂಲೆಯ ಕಡು ಬಡವರಿಗೆ ತಲುಪಿಸುವ ಕಾರ್ಯ ಮಾಡಿದ್ದಾರೆ ಎಂದು ರಾಷ್ಟ್ರೋತ್ಥಾನ ರಕ್ತನಿಧಿಯ ಮುಖಂಡ ದತ್ತಮೂರ್ತಿ ಕುಲಕರ್ಣಿ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈಗಾಗಲೇ ರಾಷ್ಟ್ರೋತ್ಥಾನ ರಕ್ತನಿಧಿಗೆ ಥರ್ಮಲ್ ಸ್ಕ್ರೀನಿಂಗ್, ಆಕ್ಸಿ ಪಲ್ಸ್ ಮೀಟರ್, ಫೇಸ್ ಶಿಲ್ಡ್, ಹ್ಯಾಂಡ್ ಸ್ಯಾನಿಟೈಸರ್ ಸೇರಿದಂತೆ ಇಪ್ಪತ್ತು ಲಕ್ಷ ಮೌಲ್ಯದ ಉಪಕರಣಗಳನ್ನು ದಾನ ರೂಪವಾಗಿ ನೀಡಿದ್ದಾರೆ ಎಂದರು.

ಕೋವಿಡ್ ಸಂದರ್ಭದಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ನಿರ್ಗತಿಕರು ಹಾಗೂ ಬಡವರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ ಜಿಲ್ಲೆಯ ಅಲೆಮಾರಿ ಜನಾಂಗದವರಿಗೆ ಹಾಗೂ ಕಡುಬಡವರಿಗೆ 5000 ಆಹಾರ ಕಿಟ್ ವಿತರಣೆ ಮಾಡಿದ್ದು, ಈಗ ಮತ್ತೇ ಐದು ಸಾವಿರ ಕಿಟ್ ವಿತರಣೆ ಬಗ್ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಅವರು ಹೇಳಿದರು.

Reach Count: 
22623