Kshetra Samachara
ಕುಂದಗೋಳ : ಕೊರೊನಾ ವೈರಸ್ ಲಾಕ್ ಡೌನ್ ಅವಧಿಯಲ್ಲಿ ಜನರಿಗೆ ಅಗತ್ಯವಾದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕುಂದಗೋಳ ಪಟ್ಟಣದ ಪೆಟ್ರೋಲ್ ಬಂಕ್'ನಲ್ಲಿ ಇಂದು ಶಾಸಕಿ ಕುಸುಮಾವತಿ ಶಿವಳ್ಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ತೊಲಗಲಿ ಮೋದಿ ವೈರಸ್, ಮೋದಿ ಮಾತಲ್ಲಿ ಸತ್ಯಕ್ಕಿಂತ ಸುಳ್ಳೇ ಜಾಸ್ತಿ, ಮಾರಕ ಮೋದಿಯ ಡಬಲ್ ಇಂಜಿನ್ ಸರ್ಕಾರ, 100+ ಪೆಟ್ರೋಲ್ ಪ್ರೈಸ್ ನಾಟ್ ಔಟ್ ಎಂಬ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಧೃತಿ ಸಾಲ್ಮನಿ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕೊಪ್ಪದ ಪೆಟ್ರೋಲ್ ಬಂಕ್ ಆಗಮಿಸಿದ ಸಾರ್ವಜನಿಕರಿಂದ ಪೆಟ್ರೋಲ್ ಬೆಲೆ ಏರಿಕೆ ಕುರಿತು ಸಾರ್ವಜನಿಕರು ಹಾಗೂ ರೈತರ ಅಭಿಪ್ರಾಯ ಸಂಗ್ರಹಿಸಿ ಗುಲಾಬಿ ಹೂ ನೀಡಿ ಪೆಟ್ರೋಲ್ ದರ ಏರಿಕೆ ವಿರೋಧಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಸರ್ವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದು ಪ್ರತಿಭಟನೆಗೆ ಬೆಂಬಲ ಬಿಜೆಪಿ ಸರ್ಕಾರದ ವೈಫಲ್ಯ ಕೂಗಿ ಕೂಗಿ ಹೇಳಿದರು.