Public News

News Subject: 
ಕೃಷ್ಣರಾಜಪೇಟೆ: ಈಜಲು ಹೋಗಿ ನೀರು ಪಾಲಾದ ಯುವಕರು
Video Thumbnail: 
PublicNext--512723--node-nid
Category: 
Accident
Body: 

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಮೋದೂರು ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಜಲಸಮಾಧಿಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಶವ ಮೇಲೆತ್ತಿದ್ದಾರೆ.

ಗ್ರಾಮದ ರಾಜು(19)ಮತ್ತು ಪ್ರದೀಪ(21) ಎಂಬುವವರೇ ಮೃತರು. ಯುವಕರ ಈ ಸಾವಿನಿಂದ ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ. ಕೃಷ್ಣರಾಜಪೇಟೆ ಗ್ರಾಮಾಂತರ ಠಾಣೆಯ ಪೋಲಿಸ್ ಇನ್ಸ್‌ಪೆಕ್ಟರ್ ಕೆ.ಎಸ್.ನಿರಂಜನ್ ಸ್ಥಳಕ್ಕೆ ಭೇಟಿ ನೀಡಿ ಕೆರೆಯ ಬಳಿ ಜನರು ಗುಂಪು ಸೇರದಂತೆ ತಡೆದು ಮೃತರಾದ ಯುವಕರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಬಗ್ಗೆ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reach Count: 
58361