Public News
News Subject:
ಎಣ್ಣೆ ಏಟಿನಲ್ಲಿ ಅಸಭ್ಯ ವರ್ತನೆ: ರುಬ್ಬು ಕಲ್ಲು ಎತ್ತಿಹಾಕಿ ಅಣ್ಣನನ್ನೇ ಕೊಲೆಗೈದ ತಂಗಿ
Upload Image:
Category:
Crime
Body:
ಹೈದರಾಬಾದ್: ಮದ್ಯದ ಮತ್ತಿನಲ್ಲಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಅಣ್ಣನನ್ನು ತಂಗಿಯೋರ್ವಳು ರುಬ್ಬು ಕಲ್ಲು ಎತ್ತಿಹಾಕಿ ಕೊಲೆಗೈದ ಘಟನೆ ತೆಲಂಗಾಣದ ಕರೀಂನಗರ ಜಿಲ್ಲಾ ಕೇಂದ್ರದಲ್ಲಿ ನಡೆದಿದೆ.
ಸತೀಶ್ ಎಂಬಾತ ಕೊಲೆಯಾದ ಅಣ್ಣ. ಕುಟುಂಬದೊಂದಿಗೆ ತಾನೂ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಗುರುವಾರ ಬೆಳಗ್ಗೆ ಕುಡಿದ ಮತ್ತಿನಲ್ಲಿ ಮನೆಗೆ ಬಂದ ಸತೀಶ್ ತನ್ನ ಕುಟುಂಬದವರೊಂದಿಗೆ ಜಗಳಕ್ಕೆ ಇಳಿದಿದ್ದಾನೆ. ಇದೇ ವೇಳೆ ತನ್ನ ತಂಗಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ನೊಂದ ತಂಗಿ ಮನೆಯಲ್ಲಿನ ರುಬ್ಬು ಕಲ್ಲನ್ನು ಸತೀಶ್ ತಲೆಯ ಮೇಲೆ ಎತ್ತಿಹಾಕಿ ಕೊಲೆ ಮಾಡಿದ್ದಾಳೆ.
ಈ ಸಂಬಂಧ ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀಬಾಬು ಮತ್ತು ಸಬ್ ಇನ್ಸ್ಪೆಕ್ಟರ್ ನಾಯುಡು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದು, ಪೂರ್ಣ ಮಾಹಿತಿ ಹೊರ ಬರಬೇಕಿದೆ.
Reach Count:
24814