Public News
News Subject:
ಮೋದಿ ಕಳಪೆ ಪ್ರಧಾನಿ, ಜನರ ರಕ್ತ ಕುಡಿಯುವ ತಿಗಣೆಯಾಗಿದ್ದಾರೆ: ಸಿದ್ದರಾಮಯ್ಯ
Upload Image:
Category:
Politics
Body:
ಬೆಂಗಳೂರು: ಅಚ್ಛೇ ದಿನ್ ಆಯೇಗಾ ಎಂದು ಭರವಸೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ರಕ್ತ ಕುಡಿಯುವ ತಿಗಣೆಯಾಗಿ ನರಕ ತೋರಿಸುತ್ತಿದ್ದಾರೆ. ಕೊರೋನಾ ಸಂಕಷ್ಟದಲ್ಲಿರುವ ಜನರನ್ನು ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದ ಮೂಲಕ ಸುಲಿಗೆ ಮಾಡುತ್ತಿರುವ ನರೇಂದ್ರ ಮೋದಿಗೆ ನಾಚಿಕೆ ಆಗಬೇಕು ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬರುವ ಮೊದಲು ಮೋದಿಯೇ ಬೆಲೆ ಏರಿಕೆಯನ್ನು ವಿರೋಧಿಸಿದ್ದರು. ಸಾಮಾನ್ಯ ಜನರು ಸಣ್ಣ ವಾಹನ ಇಟ್ಟುಕೊಂಡಿರುತ್ತಾರೆ. ಅವರ ಪರಿಸ್ಥಿತಿ ಏನು? ಕೊರೊನಾ ಗಂಡಾಂತರ ಕಾಲದಲ್ಲಿ ಜನ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಜನರಿಗೆ ಸಾಮಾನ್ಯರಿಗೆ ಹೊರಲಾಗದ ಹೊರೆಯಾಗಿದೆ.
Reach Count:
51392