Public News
News Subject:
ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಎಸ್ಐಟಿ ಮುಂದೆ ನರೇಶ್, ಶ್ರವಣ್ ಹಾಜರ್
Upload Image:
Category:
Politics
Crime
Law and Order
Body:
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಬಿ.ಎಂ.ನರೇಶ್ ಗೌಡ ಮತ್ತು ಶ್ರವಣ್ ಇಂದು ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಹಾಜರಾಗಿದ್ದಾರೆ.
ಜೂನ್ 8ರಂದು ನರೇಶ್ ಮತ್ತು ಶ್ರವಣ್ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿತ್ತು. ಹೀಗಾಗಿ ಇಂದು ತಮ್ಮ ವಕೀಲರೊಂದಿಗೆ ಆಡುಗೋಡಿ ಟೆಕ್ನಿಕಲ್ ಸೆಂಟರ್ನಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದು, ಸಿಸಿಬಿ ಎಸಿಪಿ ಧರ್ಮೇಂದ್ರ ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ನರೇಶ್ ಮತ್ತು ಶ್ರವಣ್ನನ್ನು ಬಂಧಿಸುವಲ್ಲಿ ತನಿಖಾಧಿಕಾರಿಗಳು ಸ್ವತಂತ್ರರು ಎಂದು ಕೋರ್ಟ್ ಹೇಳಿತ್ತು. ಅವಶ್ಯವಿದ್ದಲ್ಲಿ ಬಂಧಿಸುವ ಸಾಧ್ಯತೆ ಇದ್ದು, ಶ್ರವಣ್ ಮತ್ತು ನರೇಶ್ ಕಥೆ ಏನಾಗುತ್ತೆ ಎಂಬ ಕುತೂಹಲ ಹೆಚ್ಚಿದೆ.
Reach Count:
62987