Kshetra Samachara
ಹುಬ್ಬಳ್ಳಿ: ಅರುಣ ಸಿಂಗ್ ಅವರು ಕ್ಲಿಯರ್ ಆಗಿ ಹೇಳಿದ್ದಾರೆ. ಅಲ್ಲದೇ ಸಿಎಂ ಯಡಿಯೂರಪ್ಪ ಅವರು ಕೂಡ ಇನ್ನೂ ಎರಡು ವರ್ಷ ಸಿಎಂ ಆಗಿಯೇ ಇರ್ತೀನಿ ಅಂತ ಹೇಳಿದ್ದಾರೆ. ಇಲ್ಲಿ ಯಾವುದೇ ರೀತಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಷ್ಟೇ ನಮ್ಮ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಅಲ್ಲದೆ ಈಗ ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಆದರೆ ಕೆಲವರು ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದಾರೆ. ಅವರು ಯಾಕೆ ಹೋಗಿದ್ದಾರೆ ಅದನ್ನು ಅವರೇ ಹೇಳಬೇಕು. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.
ಸಚಿವ ಸಂಪುಟದ ಪುನರ್ ರಚನೆ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಕಾಂಗ್ರೇಸ್ ಆಡಳಿತಕ್ಕೆ ಬಂದರೇ ಕಾಶ್ಮೀರದಲ್ಲಿ 370 ಕಾಯಿದೆ ಪುನರ್ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಹಳಷ್ಟು ಜನರು ಹೊರ ಹೋಗುತ್ತಿದ್ದಾರೆ. ಆದರೂ ಕೂಡ ಕಾಂಗ್ರೆಸ್ ನವರಿಗೆ ಬುದ್ಧಿ ಬಂದಿಲ್ಲ. ಇಷ್ಟು ವರ್ಷ ಕಾಶ್ಮೀರಲದಲ್ಲಿ 370 ಯಿಂದ ಕಾಶ್ಮೀರದಲ್ಲಿ ಉಗ್ರಗಾಮಿಗಳು ದಾಳಿ ಮಾಡುವಂತೆ ಮಾಡಿ ಎಲ್ಲವನ್ನೂ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.