Public News
ಯಾದಗಿರಿ: ಜಿಲ್ಲೆಯ ಸುರಪುರ ನಗರದಲ್ಲಿ ಇಂದು ವಾಸು ಪೆಟ್ರೋಲ್ ಬಂಕ್ ಬಳಿ ತೈಲ ಬೆಲೆ ಏರಿಕೆ ಖಂಡಿಸಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.
ಇದೆ ವೇಳೆ ಮಾತಾನಾಡಿದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು, 100 ನಾಟ್ ಔಟ್ ಅಂದ್ರೆ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂಪಾಯಿಗಿಂತ ಹೆಚ್ಚಾಗಿದೆ. ಇಂಥ ಪರಿಸ್ಥಿತಿ ಬಂದಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ. ಅಲ್ಲದೇ ಸಾರ್ವಜನಿಕರ ತೆರಿಗೆ ಹಣವನ್ನು ಮೋದಿ ಸರ್ಕಾರ ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ರಾಜ್ಯದಲ್ಲಿ ಎಟಿಎಂಗೆ ಲೈನ್, ವ್ಯಾಕ್ಸಿನ್ ಹಾಕಿಸಿಕೊಳ್ಳಲು ಲೈನ್ ನಿಲ್ಲಬೇಕು ಇದಲ್ಲದೇ ಶವ ಸುಡಲು ಸರತಿ ಸಾಲಿನಲ್ಲಿ
ನಿಲ್ಲುವ ಸ್ಥಿತಿ ಇದೆ. ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಗುಡುಗಿದರು.
ಅಲ್ಲದೇ ಮಹಾಮಾರಿ ಕೋರೊನಾ ರೋಗವು ದೇಶಾದ್ಯಂತ ಹರಡಿ ಜನಸಾಮಾನ್ಯರ ಜೀವನ ನುಂಗುವ ಸಮಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಈ ರೀತಿ ಬೆಲೆ ಏರಿಕೆ ಮಾಡಿ ಇನ್ನಷ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜಾ ವೇಣುಗೋಪಾಲ ನಾಯಕ, ರಾಜಾ ಸಂತೋಷ್ ನಾಯಕ, ವಿಠಲ್ ಯಾದವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಯುವ ಮುಖಂಡರು ಭಾಗಿಯಾಗಿದ್ದರು.