Kshetra Samachara
Local News Subject:
ಧಾರವಾಡ: ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ ಶಾಸಕ ಅಮೃತ
City:
Hubballi-Dharwad
Category:
Health & Fitness
COVID
Body:
ಧಾರವಾಡ: ಧಾರವಾಡ ತಾಲೂಕಿನ ಗರಗ ಹಾಗೂ ಕೋಟೂರು ಗ್ರಾಮಗಳಲ್ಲಿ ತೆರೆಯಲಾಗಿರುವ ಕೋವಿಡ್ ಕಾಳಜಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರನ್ನು ಭೇಟಿ ಮಾಡಿದ ಶಾಸಕ ಅಮೃತ ದೇಸಾಯಿ, ಅವರ ಆರೋಗ್ಯ ವಿಚಾರಿಸಿದರು.
ಕೋವಿಡ್ ಕಾಳಜಿ ಕೇಂದ್ರದಲ್ಲಿ ಸೋಂಕಿತರಿಗೆ ನೀಡಲಾಗುತ್ತಿರುವ ಸೌಲಭ್ಯ, ಚಿಕಿತ್ಸೆ ಸೇರಿದಂತೆ ಎಲ್ಲಾ ವಿಷಯಗಳ ಕುರಿತು ಸ್ವತಃ ಸೋಂಕಿತರಿಂದಲೇ ಮಾಹಿತಿ ಪಡೆದರು.
ನಂತರ ಅಮೃತ ದೇಸಾಯಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪಂಚಾಯ್ತಿ ಸಿಬ್ಬಂದಿಗೆ ಶಾಸಕರು ಪ್ರಶಂಸನಾ ಪ್ರಮಾಣಪತ್ರ ವಿತರಿಸಿದರು.
Reach Count:
83587