Kshetra Samachara
Local News Subject:
ಬ್ರಹ್ಮಾವರ: ಸರ್ಕಾರದ ಸಾಧನೆ ಸಹಿಸದೆ ಕಾಂಗ್ರೆಸ್ನಿಂದ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ಸಚಿವ ಕೋಟ
City:
Udupi
Mangalore
Category:
Politics
Body:
ಬ್ರಹ್ಮಾವರ: ಕೊರೊನಾ ಸಂಕಷ್ಟದ ಕಾಲಘಟ್ಟದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಒಳ್ಳೆಯ ಆಡಳಿತ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಪ್ರಶಂಸೆ ವ್ಯಕ್ತಪಡಿಸಬೇಕಿತ್ತು. ಆದರೆ ಸರ್ಕಾರದ ಸಾಧನೆಗಳನ್ನು ಸಹಿಸದೆ ಅನಗತ್ಯವಾಗಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಹೋರಾಟ ಕೈಗೆತ್ತಿಕೊಂಡಿದೆ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಡ್ಡರ್ಸೆ ಗ್ರಾ.ಪಂ.ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಆಧಾರಿಸಿ ದೇಶದಲ್ಲಿ ತೈಲ ಬೆಲೆ ನಿರ್ಧರಿತವಾಗುತ್ತದೆ ಎನ್ನುವುದನ್ನು ತಿಳಿದೂ ಕಾಂಗ್ರೆಸ್ ಹೋರಾಟ ನಡೆಸುತ್ತಿರುವುದು ವಿಪರ್ಯಾಸ. ಇದು ಕೇವಲ ವಿರೋಧ ಪಕ್ಷವಾಗಿ ಆಡಳಿತ ಪಕ್ಷವನ್ನು ವಿರೋಧಿಸುವ ಒಂದು ಪ್ರಕ್ರಿಯೆಯಾಗಿದ್ದು, ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಮತ್ತು ಸರ್ಕಾರ ಸರಿಯಾದ ದಾರಿಯಲ್ಲಿ ಸಾಗುತ್ತಿದೆ ಎಂದರು.
Reach Count:
21154