Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Kshetra Samachara

Local News Subject: 
ಮಂಗಳೂರು: ಟೈಲರ್ ಗಳಿಗೆ ಘೋಷಿಸಿದ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ: ಸಂಘದ ಮುಖಂಡರ ಆಕ್ರೋಶ
City: 
Udupi
Mangalore
Category: 
Health & Fitness
Human Stories
COVID
Body: 

ಮಂಗಳೂರು: ಅಸಂಘಟಿತ ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿರುವ ಟೈಲರ್ ವೃತ್ತಿ ಬಾಂಧವರಿಗೆ ರಾಜ್ಯ ಸರಕಾರ ಘೋಷಿಸಿದ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎಂದು ಕೆಎಸ್‌ಟಿಎ ರಾಜ್ಯಾಧ್ಯಕ್ಷ ಆನಂದ ಕೆ.ಎಸ್. ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು ನಗರದ ಗೋರಿಗುಡ್ಡೆಯಲ್ಲಿರುವ ಟೈಲರ್ ಭವನದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಟೈಲರ್‌ಗಳು ತಾವು ಅಸಂಘಟಿತ ಕಾರ್ಮಿಕರು ಎಂದು ರುಜುವಾತು ಪಡಿಸಲು ಸರಕಾರ ಸೂಚಿಸಿದ ಅಧಿಕಾರಿಗಳ ಬಳಿ ಸಹಿ ಹಾಕಲು ಹೋದಾಗ ನೀವು ಲೈಸೆನ್ಸ್ ಮಾಡಿದ್ದೀರಾ ಎಂದು ಕೇಳುತ್ತಾರೆ. ನಾವು ಮನೆಯಲ್ಲಿಯೇ ಕೆಲಸ ಮಾಡುವುದು ಅಂತ ಪರಿ -ಪರಿಯಾಗಿ ಹೇಳಿದರೂ ಸಹಿ ಹಾಕದೇ ವಾಪಸ್ ಕಳುಹಿಸುತ್ತಾರೆ.

ಇದರಿಂದಾಗಿ ಟೈಲರ್‌ಗಳಿಗೆ ಸರಕಾರ ಘೋಷಿಸಿದ ಪ್ಯಾಕೇಜ್ ಪಡೆಯಲು ತೊಂದರೆಯಾಗುತ್ತಿದೆ. ಹೀಗಾಗಿ ಈ ಗೊಂದಲವನ್ನು ನಿವಾರಿಸಬೇಕು. ಜೊತೆಗೆ ಕೋವಿಡ್‌ನಿಂದಾಗಿ ಟೈಲರ್‌ಗಳು ಅಂಗಡಿ ಬಾಗಿಲು ತೆರೆಯದೇ ಮನೆಯಲ್ಲಿಯೇ ಉಳಿಯುವಂತಾಗಿದೆ. ಇಂತಹ ಕಷ್ಟದ ಸಮಯದಲ್ಲಿ ಸರಕಾರ ಘೋಷಣೆ ಮಾಡಿದ ಪ್ಯಾಕೇಜ್ ಮೊತ್ತ ೨ ಸಾವಿರ ರೂಪಾಯಿಯನ್ನು ಪಡೆಯಲು ಎಪಿಎಲ್ ಮತ್ತು ಬಿಪಿಎಲ್ ಎಂಬ ಮಾನದಂಡವನ್ನು ನಿಗದಿ ಪಡಿಸಿರುವುದು ಟೈಲರ್ ವೃತ್ತಿ ಬಾಂಧವರಲ್ಲಿ ತಾರತಮ್ಯ ಮಾಡಿದಂತಾಗಿದೆ.

ಎಂದರು. ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್, ಕೆಎಸ್‌ಟಿಎ ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಬಿ. ವಸಂತ್, ನಗರ ಸಮಿತಿ ಮಾಜಿ ಅಧ್ಯಕ್ಷೆ ಕುಸುಮ ದೇವಾಡಿಗ ಉಪಸ್ಥಿತರಿದ್ದರು.

Reach Count: 
9727