Public News
ಬೆಂಗಳೂರು: ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿ.ಮೀ. ಮೆಟ್ರೋ ನೇರಳೆ ಮಾರ್ಗವನ್ನು ಭಾನುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ವಸತಿ, ನಗರ ವ್ಯವಹಾರ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದರು.
ಈ ಮೂಲಕ ಬಹುನಿರೀಕ್ಷಿತ ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮೊದಲ ಮೆಟ್ರೋ ಸಂಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೊರುವ ಮೂಲಕ ಚಾಲನೆ ನೀಡಿದ್ದಾರೆ. 1,560 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಮಾರ್ಗ 7.5 ಕಿಲೋ ಮೀಟರ್ ಉದ್ದ ಇದ್ದು, ಈ ಮಾರ್ಗದಲ್ಲಿ 6 ನಿಲ್ದಾಣಗಳು ಬರಲಿವೆ.
ಮೆಟ್ರೋ ನೇರಳೆ ಮಾರ್ಗದ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರದ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ, ಸಂಸದ ತೇಜಸ್ವಿ ಸೂರ್ಯ, ಸಚಿವರಾದ ವಿ ಸೋಮಣ್ಣ, ಆರ್. ಅಶೋಕ್, ಮುನಿರತ್ನ, ಎಸ್ ಟಿ ಸೋಮಶೇಖರ್ ಗೋಪಾಲಯ್ಯ ಉಪಸ್ಥಿತರಿದ್ದರು.