Kshetra Samachara
ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಮಲ ಪಡೆಯ ಜನ ಸ್ನೇಹಿ ನಾಯಕ ಎಂದೇ ಗುರುತಿಸಿಕೊಂಡಿರುವ ವಾರ್ಡ್ ನಂಬರ 38ರ ಬಿಜೆಪಿ ಅಭ್ಯರ್ಥಿ ತಿಪ್ಪಣ್ಣ ಮಜ್ಜಿಗಿಯವರು ಬಿರುಸಿನಲ್ಲಿಯೇ ಚುನಾವಣೆ ತಯಾರಿ ನಡೆಸಿದ್ದು, ಎಲ್ಲೆಡೆಯೂ ಸಾಕಷ್ಟು ಬೆಂಬಲ ವ್ಯಕ್ತವಾಗುತ್ತಿದೆ.
ಹೌದು.. ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂಬರ 38ರಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ತಿಪ್ಪಣ್ಣ ಮಜ್ಜಿಗಿಯವರ ಬೆಂಬಲಿಗರು ಮತದಾರರಿಗೆ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡುತ್ತಿದ್ದಾರೆ.
ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಜನನಾಯಕ ತಿಪ್ಪಣ್ಣ ಮಜ್ಜಿಗಿಯವರಿಗೆ ಜನರು ಆಶೀರ್ವಾದ ಮಾಡುವ ಭರವಸೆ ವ್ಯಕ್ತಪಡಿಸಿದ್ದಾರೆ. ಮಾಜಿ ಮೇಯರ್ ಅಶ್ವಿನಿ ಮಜ್ಜಿಗಿಯವರ ನೇತೃತ್ವದಲ್ಲಿ ನಡೆದ ಅವಳಿನಗರದ ಅಭಿವೃದ್ಧಿಗೆ ಜನರು ಸ್ಪಂದಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ತಿಪ್ಪಣ್ಣ ಮಜ್ಜಿಗಿಯವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡುವ ಭರವಸೆ ನೀಡಿದ್ದಾರೆ.