Kshetra Samachara

Local News Subject: 
ಉಡುಪಿ: ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಚೆಕ್ ವಿತರಣೆ
City: 
Udupi
Mangalore
Upload Image: 
PublicNext-546630-633523-Udupi-Mangalore-Infrastructure-node
Category: 
Infrastructure
Body: 

ಕೊಡವೂರು: ಉಡುಪಿ ವಿಧಾನಸಭೆ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಕೊಡವೂರು ನಿವಾಸಿ ಮೋಕ್ಷಿತ್ ಎಂಬವರು ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಶಿಫಾರಸು ಮಾಡಿದ್ದರು.ಅದರಂತೆ ಪ್ರಾಕೃತಿಕ ಪರಿಹಾರ ನಿಧಿಯಿಂದ ರೂ. 5 ಲಕ್ಷ ಮಂಜೂರಾಗಿದ್ದು,ಇವತ್ತು ಉಡುಪಿ ಶಾಸಕ ರಘುಪತಿ ಭಟ್ ಮೃತರ ಮನೆಗೆ ಭೇಟಿ ನೀಡಿ ಪರಿಹಾರದ ಚೆಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್ ಹಾಗೂ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಗ್ರಾಮ ಲೆಕ್ಕಾಧಿಕಾರಿಗಳಾದ ಕಾರ್ತಿಕೇಯ ಉಪಸ್ಥಿತರಿದ್ದರು.

Reach Count: 
2383
Show Detail Screen Advertisement: 
Yes